ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಜರಗಿದ ಸಮಾರಂಭದಲ್ಲಿ ಸುಮಾರು ರೂ. 15 ಲಕ್ಷ ಮೌಲ್ಯದ 50 ಸಾವಿರಕ್ಕಿಂತಲೂ ಅಧಿಕ ನೋಟ್ ಪುಸ್ತಕವನ್ನು ಜಿಲ್ಲೆಯ 100 ಕನ್ನಡ ಮಾಧ್ಯಮ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಯಿತು. ಲಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆ ಇವರೊಂದಿಗೆ ಒಡಂಬಡಿಕೆ ಮಾಡಿಕೊಂಡು ಸಂಘದ ಸದಸ್ಯರಿಗೆ, ಗ್ರಾಹಕರಿಗೆ ಅನುಕೂಲವಾಗುವಂತೆ “ಲಂಬಾರ್ಡ್ ಆರೋಗ್ಯ ಕಾರ್ಡ್”ನ್ನು 1900 ಸದಸ್ಯರಿಗೆ ವಿತರಿಸಲಾಯಿತು. ಡಾ| ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಇದರ ಸಭಾಂಗಣಕ್ಕೆ ಸಂಘದ ವತಿಯಿಂದ 200 ಆಸನಗಳನ್ನು, ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ, ಚೆಂಡ್ಕಳ, ಕೊಡವೂರು ಇವರಿಗೆ ಸಂಘದ ವತಿಯಿಂದ 50 ಆಸನಗ¼ನ್ನು ವಿತರಿಸಲಾಯಿತು. ಅಲ್ಲದೆ ಸಂಘದ ವತಿಯಿಂದ ಆರ್ಥಿಕ ಸಹಾಯ ವಿತರಣಾ ಕಾರ್ಯಕ್ರಮ ನೆರವೆರಿತು. ಗೋ-ಗ್ರೀನ್ ಅಭಿಯಾನದಡಿ ಇಂಧನ ಉಳಿತಾಯ ಹಾಗೂ ಪರಿಸರ ಮಾಲಿನ್ಯ ತಡೆಗೆ ಒತ್ತು ನೀಡುವ ಉದ್ದೇಶದಿಂದ ಸಂಘದ ಸಿಬ್ಬಂದಿಗಳಿಗೆ ಸೈಕಲ್ ವಿತರಿಸುವ ಕಾರ್ಯಕ್ರಮವು ಕೂಡಾ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಮ್.ಎನ್ ರಾಜೇಂದ್ರ ಕುಮಾರ್ ವಹಿಸಿದ್ದರು. ಸಮಾರಂಭದ ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಕೆ ರಘುಪತಿ ಭಟ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಯುತ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವರಾದ ಶ್ರೀಯುತ ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಯುತ ಪ್ರವೀಣ್ ಬಿ ನಾಯಕ್, ಹಾಗೂ ಶತಮಾನೋತ್ಸವ ಸಮಿತಿ ಸಂಚಾಲಕರಾದ ಶ್ರೀ ಪುರುಷೋತ್ತಮ ಪಿ. ಶೆಟ್ಟಿಯವರು ಉಪಸ್ಥಿತರಿದ್ದರು.ಸಂಘದ ಅಧ್ಯಕ್ಷರಾದ ಶ್ರೀಯುತ ಸಂಜೀವ ಕಾಂಚನ್ ರವರು ಸ್ವಾಗತಿಸಿ,ಪ್ರಧಾನ ವ್ಯವಸ್ಥಾಪಕರಾದ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವನೆಗೈದರು. ಸಭಾ ಕಾರ್ಯಕ್ರಮದ ಮೊದಲು ಆಗಮಿಸಿದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ| ಗಣನಾಥ ಶೆಟ್ಟಿ ಎಕ್ಕಾರು ಮಾಹಿತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಭಾರ್ಗವಿ ಗ್ರೂಪ್ ಆಫ್ ಎಂಟರ್ಟೇನ್ಮೆಂಟ್ ಹಾಗೂ ತನುಶ್ರೀ ಪಿತ್ರೋಡಿಯವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಏರ್ಪಟ್ಟಿದ್ದವು. ಶ್ರೀಯುತ ಪ್ರವೀಣ್ ಕುಮಾರ್ ಧನ್ಯವಾದ ಸಮರ್ಪಿಸಿ, ಶ್ರೀಯುತ ನವೀನ್ ಕೆ ಈ ಎಲ್ಲಾ ಕಾರ್ಯಕ್ರಮಗಳನ್ನು ನಿರ್ವಹಿಸಿದರು.