Badagabettu Society

ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 ದಿ. ಡಾ. ವಿ. ಎಸ್. ಆಚಾರ್ಯ ಇವರ ಜಯಂತಿಯ ಪ್ರಯುಕ್ತ ನುಡಿನಮನ ಹಾಗೂ ‘ಏಕ್ ಪೇಡ್ ಮಾ ಕೆ ನಾಮ್’ ಗಿಡ ನೆಡುವ ಸಂಕಲ್ಪ

ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ-2025 “ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು” ಎಂಬ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ., ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ. ಉಡುಪಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ದಿ. ಡಾ. ವಿ. ಎಸ್. ಆಚಾರ್ಯ ಇವರ ಜಯಂತಿಯ ಪ್ರಯುಕ್ತ ನುಡಿನಮನ ಹಾಗೂ ‘ಏಕ್ ಪೇಡ್ ಮಾ ಕೆ ನಾಮ್’ ಗಿಡ ನೆಡುವ ಸಂಕಲ್ಪ….. ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ ಎಂಬ ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಡಾ. ವಿ. ಎಸ್. ಆಚಾರ್ಯ ಜಿಲ್ಲಾ ತರಬೇತಿ ಕೇಂದ್ರ, ಪ್ರಗತಿ ನಗರ, ಮಣಿಪಾಲ ಇಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ನಿ., ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕರಾದ ಶ್ರೀಯುತ. ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ವಹಿಸಿದ್ದರು.ಕಾರ್ಯಕ್ರಮದ ಮುಖ್ಯ ಅತಿಥಿಗಳು ಡಾ.ಕಿರಣ್ ಆಚಾರ್ಯ, ಮುಖ್ಯಸ್ಥರು, ಎಲುಬುಮತ್ತುಕೀಲು ವಿಭಾಗ, ಕೆಎಂಸಿ ಮಣಿಪಾಲ, ಜನಾರ್ದನ ಕೊಡವೂರು ಸ್ಕೌಟ್ ಆಯುಕ್ತರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕಜಿಲ್ಲಾಸಂಸ್ಥೆ ಉಡುಪಿ, ಶ್ರೀ. ಅರುಣ್ ಕುಮಾರ್ ಶೆಟ್ಟಿ, ಅಧ್ಯಕ್ಷರು , ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ನಿ., ಶ್ರೀ. ನಾರಾಯಣ ಬಲ್ಲಾಳ್ ಅಧ್ಯಕ್ಷರು, ಕೊಡವೂರು ವ್ಯವಸಾಯ ಸೇವಾ ಸಹಕಾರ ಸಂಘ ನಿ., ಶ್ರೀ. ವೈ.ಸುಧೀರ್ ಕುಮಾರ್, ಅಧ್ಯಕ್ಷರು, ಪಡುಬಿದ್ರಿ ವ್ಯವಸಾಯಿಕ ಸೊಸೈಟಿ ನಿ.,ಪಡುಬಿದ್ರಿ, ಶ್ರೀ. ಅಶೋಕ್ ಶೆಟ್ಟಿ ಮೈರ್ಮಾಡಿ, ಅಧ್ಯಕ್ಷರು, ಉಡುಪಿ ಟಿ.ಎ.ಪಿ.ಸಿ. ಎಂ. ಎಸ್ ಲಿ., ಉಡುಪಿ, ಶ್ರೀ. ಯತೀಶ್ ಕುಮಾರ್, ಅಧ್ಯಕ್ಷರು, ಅಲೆವೂರು ಗ್ರಾಮ ಪಂಚಾಯಿತ್, ಶ್ರೀ. ಮೋಹನ್ ಉಪಾಧ್ಯ, ಅಧ್ಯಕ್ಷರು, ಕೆನರಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ., ಶ್ರೀ. ಸುರೇಶ್ ಶೆಟ್ಟಿ, ಅಧ್ಯಕ್ಷರು, ಗುರು ನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ.,ಉಡುಪಿ , ಶ್ರೀ. ಹರೀಶ್ ಕಿಣಿ ,ನಿರ್ದೇಶಕರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿ ಸದಸ್ಯರು ಹಾಗೂ ಪ್ರಧಾನ ವ್ಯವಸ್ಥಾಪಕರು ಶ್ರೀ ರಾಜೇಶ್ ವಿ. ಶೇರಿಗಾರ್ , ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ. ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು.