ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾದೀಶತೀರ್ಥ ಶ್ರೀಪಾದರು ಬೇಟಿ ನೀಡಿ ನೆರೆದ ಸರ್ವರಿಗೆ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸಂಜೀವ ಕಾಂಚನ್, ಉಪಾಧ್ಯಕ್ಷ ಎಲ್ .ಉಮಾನಾಥ್, ಶತಮಾನೋತ್ಸವ ಸಮಿತಿ ಸಂಚಾಲಕರಾದ ಪುರುಶೋತ್ತಮ ಪಿ ಶೆಟ್ಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ , ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ, ದೈನಿಕ ಠೇವಣಿ ಸಂಗ್ರಾಹಕರು ಮತ್ತು ಸಂಘದ ಹಿತೈಷಿಗಳು ಉಪಸ್ಥಿತರಿದ್ದರು.