ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಲಿ ಹಾಗೂ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ 69 ನೇ ಗಣರಾಜೋತ್ಸವ ದಿನವನ್ನು ವಿದ್ಯಾರ್ಥಿಗಳೊಂದಿಗೆ “ರಕ್ತವರ್ಗೀಕರಣ ಶಿಬಿರ”ವನ್ನು ಆಯೋಜಿಸುವುದರ ಮೂಲಕ ಕಾಲೇಜಿನಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಈ ಸಮಾರಂಭದಲ್ಲಿ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ಜಯಕರ ಶೆಟ್ಟಿ ಇಂದ್ರಾಳಿ ಧ್ವಜರೋಹÀಣಗೈದರು.ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶ್ವೇತಾ ಶ್ರೀನಿವಾಸ್ ಹಾಗೂ ಸೊಸೈಟಿಯ ಸಿಬ್ಬಂದಿಗಳು,ಕಾಲೇಜಿನ ಪ್ರಾಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶ್ರೀ ನಾಗರಾಜ್ ಧನ್ಯವಾದ ಸಮರ್ಪಿಸಿ,ಶ್ರೀ ಶಂಕರ ಕೆಂಜೂರು ಕಾರ್ಯಕ್ರಮ ನಿರೂಪಿಸಿದರು.