Badagabettu Society

ವಿಶ್ವ ಪರಿಸರ ದಿನಾಚರಣೆ- ಚಿತ್ರಕಲಾ ಸ್ಪರ್ಧೆ

ವಿಶ್ವ ಪರಿಸರ ದಿನಾಚರಣೆ- ಚಿತ್ರಕಲಾ ಸ್ಪರ್ಧೆ

ಬೈಲೂರು ಪರಿಸರ ಪ್ರೇಮಿಗಳು, ಬಡಗಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿಯಮಿತ, ಸಹಕಾರ ಇಲಾಖೆ ಉಡುಪಿ ಜಿಲ್ಲೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕಲಾ ಕಿರಣ್ ಕ್ಲಬ್ ಬೈಲೂರು ಹಾಗೂ ಪಶುಪಾಲನ ಮತ್ತು ವೈದ್ಯಕೀಯ ಸೇವಾ ಇಲಾಖೆ ಉಡುಪಿ ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನ ಇವರ ಸಹಭಾಗಿತ್ವದಲ್ಲಿ ದಿನಾಂಕ 08-06-2025 ರಂದು ಬೈಲೂರು ದೇವಸ್ಥಾನದ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಸಿರು ನನ್ನೂರು ಬೈಲೂರು ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರವನ್ನು ಉದ್ಘಾಟಿಸಿ ಪರಿಸರವನ್ನು ಹೇಗೆ ಶುದ್ಧವಾಗಿ ಇರಿಸುವುದು ಹಾಗೂ ಉತ್ತಮ ಪರಿಸರಕ್ಕೆ ನಮ್ಮ ಕೊಡುಗೆ ಏನು ಎನ್ನುವ ಬಗ್ಗೆ ವಿವರಿಸಿದರು ಹಾಗೂ ಪರಿಸರದ ಬಗ್ಗೆ ವಿದ್ಯಾರ್ಥಿ ಜೀವನದಲ್ಲಿ ತಿಳಿದುಕೊಳ್ಳುವಂತೆ ಪೋಷಕರು ಮಕ್ಕಳಿಗೆ ಮನೆಯಲ್ಲಿ ಈ ಬಗ್ಗೆ ತಿಳಿಸಬೇಕೆಂದು ವಿನಂತಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿ ಸಂಪನ್ಮೂಲ ವ್ಯಕ್ತಿಯಾದ ಶ್ರೀ ಶ್ರೀನಿವಾಸರಾವ್ ಉಡುಪಿ ಜಿಲ್ಲಾ ಪಂಚಾಯತ್ ನಿವೃತ್ತ ಉಪ ಕಾರ್ಯದರ್ಶಿ ಶ್ರೀ ಶ್ರೀನಿವಾಸರಾವ್ ಮನೆಮನೆಗಳಲ್ಲಿ ಶುಚಿತ್ವದ ಕಾರ್ಯಕ್ರಮವನ್ನು ಯಾವ ರೀತಿ ಹಮ್ಮಿಕೊಳ್ಳಬೇಕು ಜವಾಬ್ದಾರಿಯುತ ನಾಗರಿಕರಾಗಿ ನಾವು ಯಾವ ರೀತಿಯಲ್ಲಿ ಪರಿಸರವನ್ನು ರಕ್ಷಿಸಬೇಕು ಎಂದು ತಿಳಿ ಹೇಳಿದರು. ಇನ್ನೋರ್ವ ಅತಿಥಿ ಎಸ್.ವಿ.ಸಿ ಬ್ಯಾಂಕಿನ ನಿರ್ದೇಶಕರಾದ ತೋನ್ಸೆ ಸತೀಶ್ ರಾವ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂದೇಶವನ್ನು ನೀಡಿದರು. ಸಭಾ ವೇದಿಕೆಯಲ್ಲಿ ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಕಾರ್ಯದರ್ಶಿಯಾದ ಶ್ರೀ ನಾರಾಯಣ ದಾಸ್ ಉಡುಪ ಹಾಗೂ ಮೊಕ್ತೆಸರರಾದ ಶ್ರೀ ಕಳತ್ತೂರು ರಮೇಶ್ ಶೆಟ್ಟಿ ಹಾಗೂ ಬಡಗಬೆಟ್ಟು ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ಶೇರಿಗಾರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಸಿಇಒ ಶ್ರೀಮತಿ ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು.
ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ಸಭಾ ವೇದಿಕೆಯಲ್ಲಿ ಬಹುಮಾನವನ್ನು ವಿತರಿಸಲಾಯಿತು. ಬಡಗಬೆಟ್ಟು ಸೊಸೈಟಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು ಶ್ರೀ ದುರ್ಗಾಪ್ರಸಾದ್ ವಂದಿಸಿದರು.