Badagabettu Society

ಬೈಲೂರು: ವಿಶ್ವ ಪರಿಸರ ದಿನಾಚರಣೆ-ಚಿತ್ರಕಲಾ ಸ್ಪರ್ಧೆ

ವನಮಹೋತ್ಸವ ಕಾರ್ಯಕ್ರಮ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಪರಿಸರ ಪ್ರೇಮಿಗಳು ಬೈಲೂರು, ಕಲಾಕಿರಣ್ ಕ್ಲಬ್ ಬೈಲೂರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಡುಪಿ, ಬೈಲೂರು ಮಹಿಷಮರ್ದಿನಿ ದೇವಸ್ಥಾನದ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ “ಹಸಿರು ನನ್ನೂರು ಬೈಲೂರು” ಗಿಡನೆಡುವ ಸಂಕಲ್ಪ…. ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ… ಎನ್ನುವಂತೆ ಗಿಡನೆಡುವ ಕಾರ್ಯಕ್ರಮ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಡುಪಿ ಇದರ ವಠಾರದಲ್ಲಿ ಜರಗಿತು. ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಗಿಡನೆಡುವ ಮೂಲಕ ಕಾರ್ಯಕ್ರಮವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬಡಗಬೆಟ್ಟು ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್, ಪಶುಸಂಗೋಪನಾ ಇಲಾಖೆಯ ಡಾ. ಪ್ರಶಾಂತ್ ಶೆಟ್ಟಿ, ಎಸ್.ವಿ.ಸಿ ಬ್ಯಾಂಕಿನ ನಿರ್ದೇಶಕರಾದ ಸತೀಶ್ ಟಿ, ಕಲಾಕಿರಣ್ ಕ್ಲಬ್ಬಿನ ಮಾಜಿ ಅಧ್ಯಕ್ಷರಾದ ಸುಭಾಷ್ ಕೆ, ಕಾರ್ಯಕ್ರಮದ ಸಂಚಾಲಕರಾದ ವೆಂಕಟೇಶ್ ಪ್ರಭು, ದುರ್ಗಾಪ್ರಸಾದ್, ನವೀನ್ ನಿಶ್ಚಲ್  ಇನ್ನಿತರರು ಉಪಸ್ಥಿತರಿದ್ದರು.

ಚಿತ್ರಕಲಾ ಸ್ಪರ್ಧೆ

ದಿನಾಂಕ 07-06-2026 ರಂದು ಬೈಲೂರು ದೇವಸ್ಥಾನದ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಸಿರು ನನ್ನೂರು ಬೈಲೂರು- ಚಿತ್ರಕಲಾ ಸ್ಪರ್ಧೆ ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಕಾರ್ಯಕ್ರವನ್ನು ಉದ್ಘಾಟಿಸಿ ಉತ್ತಮ ಪರಿಸರಕ್ಕೆ ನಮ್ಮ ಕೊಡುಗೆ ಏನು ಎನ್ನುವ ಬಗ್ಗೆ ವಿವರಿಸಿದರು ಹಾಗೂ ಪರಿಸರದ ಬಗ್ಗೆ ವಿದ್ಯಾರ್ಥಿ ಜೀವನದಲ್ಲಿ ತಿಳಿದುಕೊಳ್ಳುವಂತೆ ಪೋಷಕರು ಮಕ್ಕಳಿಗೆ ಮನೆಯಲ್ಲಿ ಈ ಬಗ್ಗೆ ತಿಳಿಸಬೇಕೆಂದು ವಿನಂತಿಸಿದರು.  ಡಾ.ಯು.ಮುನಿಯಲ್ ಮೆಮೋರಿಯಲ್ ಟ್ರಸ್ಟ್ ನ ಟ್ರಸ್ಟಿ, ಡಾ.ಕೃಷ್ಣಾ ಲೈಫ್ ಸೈನ್ಸ್ ಲಿ., ಮುನಿಯಾಲ್ ಆಯುರ್ವೇದದ ಡೈರೆಕ್ಟರ್ ಡಾ.ಶ್ರದ್ಧಾ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪರಿಸರ ಕಾಳಜಿಯ ಕುರಿತು ಮಾಹಿತಿ ಹಂಚಿಕೊಂಡರು.  ಸಭಾ ವೇದಿಕೆಯಲ್ಲಿ ಪಶುಪಾಲನ ಮತ್ತು ವೈದ್ಯಕೀಯ ಸೇವಾ ಇಲಾಖೆ ಉಡುಪಿಯ ಉಪನಿರ್ದೇಶಕರಾದ ಡಾ| ಎಂ.ಸಿ ರೆಡ್ಡಪ್ಪ. ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೆಸರರಾದ ಶ್ರೀ ಮೋಹನ ಮುದ್ದಣ್ಣ ಶೆಟ್ಟಿ, ಎಸ್.ವಿ.ಸಿ ಬ್ಯಾಂಕಿನ ಡೈರೆಕ್ಟರ್ ಶ್ರೀ ಸತೀಶ್ ರಾವ್, ಕಲಾಕಿರಣ್ ಕ್ಲಬ್ ನ ಮಾಜಿ ಅಧ್ಯಕ್ಷರಾದ ಪ್ರಭಾಕರ ಭಂಡಾರಿ ಉಪಸ್ಥಿತರಿದ್ದರು.

ಚಿತ್ರಕಲಾ ಸ್ಪರ್ಧೆಯಲ್ಲಿ ಸುಮಾರು 130ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ಸಭಾ ವೇದಿಕೆಯಲ್ಲಿ ಬಹುಮಾನವನ್ನು ವಿತರಿಸಲಾಯಿತು. ಬಡಗಬೆಟ್ಟು ಸೊಸೈಟಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಪ್ರವೀಣ್ ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀ ದುರ್ಗಾಪ್ರಸಾದ್ ವಂದಿಸಿದರು.