Badagabettu Society

ವಿಶ್ವ ಆರೋಗ್ಯ ದಿನಾಚರಣೆ-2025 (ಉಚಿತ ಆರೋಗ್ಯ ತಪಾಸಣಾ ಶಿಬಿರ)

ಪ್ರತಿಯೊಬ್ಬ ಜನಸಾಮಾನ್ಯರು ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ಹೊಂದುವುದರೊAದಿಗೆ ಸದೃಢವಾದ ‘ಆರೋಗ್ಯ ಕಾಪಾಡಿಕೊಂಡು ಸ್ವಾಸ್ಥ್ಯ ಜೀವನ ನಡೆಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಹೇಳಿದರು. ಅವರು ಸೋಮವಾರ ನಗರದ ಮೀಡಿಯಂ ಸ್ಕೂಲ್ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಜಿಲ್ಲಾ ಸರ್ವೇಕ್ಷಣಾ ಘಟಕ ಎನ್.ಸಿ.ಡಿ ಘಟಕ, ಜಿಲ್ಲಾ ಆಸ್ಪತ್ರೆ ಎನ್ .ಸಿ.ಡಿ ವಿಭಾಗ, ಕ್ರಿಶ್ಚಿಯನ್ ಇಂಗ್ಲೀಷ್ ಮೀಡಿಯಂ ಸ್ಕೂಲ್, ಮಿಷನ್ ಆಸ್ಪತ್ರೆ ರೋಡ್ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಪೊಲೀಸ್ ಉಪಾಧೀಕ್ಷಕರ ಕಚೇರಿ ಉಪವಿಭಾಗ ಹಾಗೂ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಜಿಲ್ಲಾ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಜಿಲ್ಲಾ ಎನ್ ಸಿಡಿ ಕೋ-ಆರ್ಡಿನೇಟರ್ ಡಾ. ಅಂಜಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಸರ್ಜನ್ ಡಾ. ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ನ್ಯೂಸಿಟಿ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಆರೋಗ್ಯ ಕಾಳಜಿ ಕುರಿತು ಕಿರುನಾಟಕ ಪ್ರದರ್ಶಿಸಲಾಯಿತು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಅಧ್ಯಕ್ಷ ಡಾ. ಸುರೇಶ್ ಶೆಣೈ, ಮಂಗಳೂರು ಎ.ಜೆ ಆಸ್ಪತ್ರೆಯ ರೇಡಿಯೇಷನ್ ಅಂಕೊಲಾಜಿ ವಿಭಾಗ ಮುಖ್ಯಸ್ಥಡಾ. ಕಮಲಾಕ್ಷ ಶೆಣೈ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಇಒ ರಾಜೇಶ್ ಶೇರಿಗಾರ್, ಕ್ರಿಶ್ಚಿಯನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮುಖ್ಯೋಪಾಧ್ಯಾಯಿನಿ ಹೆಲೆನ್, ಪಿ.ಎಸ್.ಐ ಈರಣ್ಣ, ಜಿಲ್ಲಾ ಆಸ್ಪತ್ರೆಯ ಆಪ್ತ ಸಮಾಲೋಚಕ ಮನು ಎಸ್.ಬಿ. ನ್ಯೂಸಿಟಿ ಕಾಲೇಜ್ ಆಫ್ ನರ್ಸಿಂಗ್ ಇಲ್ಲಿನ ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಸರ್ಜನ್ ಡಾ. ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ನ್ಯೂಸಿಟಿ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಆರೋಗ್ಯ ಕಾಳಜಿ ಕುರಿತು ಕಿರುನಾಟಕ ಪ್ರದರ್ಶಿಸಲಾಯಿತು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಅಧ್ಯಕ್ಷ ಡಾ. ಸುರೇಶ್ ಶೆಣೈ, ಮಂಗಳೂರು ಎ.ಜೆ ಆಸ್ಪತ್ರೆಯ ರೇಡಿಯೇಷನ್ ಅಂಕೊಲಾಜಿ ವಿಭಾಗ ಮುಖ್ಯಸ್ಥಡಾ. ಕಮಲಾಕ್ಷ ಶೆಣೈ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಇಒ ರಾಜೇಶ್ ಶೇರಿಗಾರ್, ಕ್ರಿಶ್ಚಿಯನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮುಖ್ಯೋಪಾಧ್ಯಾಯಿನಿ ಹೆಲೆನ್, ಪಿ.ಎಸ್.ಐ ಈರಣ್ಣ, ಜಿಲ್ಲಾ ಆಸ್ಪತ್ರೆಯ ಆಪ್ತ ಸಮಾಲೋಚಕ ಮನು ಎಸ್.ಬಿ. ನ್ಯೂಸಿಟಿ ಕಾಲೇಜ್ ಆಫ್ ನರ್ಸಿಂಗ್ ಇಲ್ಲಿನ ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಸ್ವಾಗತಿಸಿ, ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ನಿರೂಪಿಸಿದರೆ, ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ವಂದಿಸಿದರು. ಈ ಶಿಬಿರದಲ್ಲಿ ಮಧುಮೇಹ ರಕ್ತಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಹೃದ್ರೋಗ ತಪಾಸಣೆ (ECG ಪರೀಕ್ಷೆ) ಗರ್ಭಕಂಠ ಕ್ಯಾನ್ಸರ್ ತಪಾಸಣೆ, ಸ್ಥನ ಕ್ಯಾನ್ಸರ್ ತಪಾಸಣೆ, ಬಾಯಿ ಕ್ಯಾನ್ಸರ್ ಮತ್ತು ದಂತ ತಪಾಸಣೆ, ಕಣ್ಣಿನ ಪರೀಕ್ಷೆ, HB ಪರೀಕ್ಷೆ ಹಾಗೂ ಜೀವನ ಶೈಲಿ ಮಾರ್ಪಾಡು ಕುರಿತು ಆಪ್ತಸಮಾಲೋಚನೆ, ತಂಬಾಕು ದುಷ್ಪರಿಣಾಮಗಳ ಬಗ್ಗೆ ಆಪ್ತ ಸಮಾಲೋಚನೆ, ಪಿಜಿಯೋಥೆರಪಿ ಸೌಲಭ್ಯಗಳನ್ನು ನೀಡಲಾಯಿತು ಹಾಗೂ ಆರೋಗ್ಯ ದಿನಾಚರಣೆಯ ಮಹತ್ವದ ಕುರಿತು “ಆರೋಗ್ಯವೇ ಭಾಗ್ಯ” ಎಂಬ ಕಿರುನಾಟಕದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು ಹಾಗೂ ಆರೋಗ್ಯದ ಕುರಿತು ವ್ಯಾಯಾಮ, ಜೀವನಶೈಲಿ ಮಾರ್ಪಾಡು ಮತ್ತು ಮುನ್ನೆಚ್ಚರಿಕೆ ಕ್ರಮಗಳು ಬಗ್ಗೆ ಹಾಡಿನ ಮೂಲಕ ಅರಿವು ಮೂಡಿಸಲಾಯಿತು.

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: ಮಾರ್ಪಳ್ಳಿ ಶಂಕರ್ ಶೇರಿಗಾರ್ ಸನ್ಮಾನ

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿರುವ ಮಾರ್ಪಳ್ಳಿ ಶಂಕರ್ ಶೇರಿಗಾರ್ ಅವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಆರಂಭದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಂಡ ಶಂಕರ ಶೇರಿಗಾರ್ ಕ್ರಮೇಣ ಕಿರಿಯ ಗುಮಾಸ್ತ, ಹಿರಿಯ ಗುಮಾಸ್ತ ಹುದ್ದೆಯನ್ನು ಅಲಂಕರಿಸಿದ್ದರು. ಬಳಿಕ ವಿವಿಧ ಶಾಖೆಗಳಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ್ದ ಇವರು ಸಾಲ ವಸೂಲಾತಿ ವಿಭಾಗದಲ್ಲಿ ಹಾಗೂ ಮಾರಾಟಾಧಿಕಾರಿಯಾಗಿಯೂ ಬಹಳ ನಿಷ್ಠೆಯಿಂದ ದುಡಿದಿದ್ದಾರೆ. ಇದೀಗ ಶಾಖಾ ವ್ಯವಸ್ಥಾಪಕರಾಗಿ ವಯೋನಿವೃತ್ತಿ ಹೊಂದಿರುವ ಶಂಕರ ಶೇರಿಗಾರ್ ಅವರಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅವರ ಮುಂದಿನ ಜೀವನ ಶ್ರೇಯಸ್ಸಿನಿಂದ ತುಂಬಿರಲಿ ಎಂದು ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್, ಪ್ರಧಾನ ವ್ಯವಸ್ಥಾಪಕಾರದ ರಾಜೇಶ್ ವಿ. ಶೇರಿಗಾರ್, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ

ಪರ್ಯಾಯ ಶ್ರೀಕೃಷ್ಣಮಠದ ಆಶ್ರಯದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಇವರ ಸಹಭಾಗಿತ್ವದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಹಾಗು ಮಹಿಳಾ ವೈದ್ಯರ ಘಟಕ, ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಹಾಗೂ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇಲ್ಲಿನ ತಜ್ಞ ವೈದ್ಯರುಗಳ ಸಮ್ಮಿಲನದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರವು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿತು. ಶಿಬಿರವನ್ನು ಪರಮಪೂಜ್ಯ ಪರ್ಯಾಯ ಶ್ರೀಪಾದರಾದ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. “ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕಾಂಶ ಆಹಾರದ ಅಗತ್ಯತೆ” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು. ಎಲ್ಲಾ ತರಹದ ಆರೋಗ್ಯ, ದಂತ, ಕಣ್ಣಿನ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ಗರ್ಭಕಂಠದ ಸ್ತಿçÃಯರ ಪರೀಕ್ಷೆ, ಎಲುಬಿನ ಸಾಂದ್ರತೆ ಪರೀಕ್ಷೆಗಳನ್ನು ತಜ್ಞ ವೈದ್ಯರಿಂದ ನಡೆಸಲಾಯಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ ಶೇರಿಗಾರ್, ಎ.ಜಿ.ಎಂ ಪ್ರವೀಣ್ ಕುಮಾರ್, ರತ್ನಾಕರ್ ಇಂದ್ರಾಳಿ ಇತರ ಪ್ರಮುಖರು ಉಪಸ್ಥಿತರಿದ್ದರು.

ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಕಾಪು ನವದುರ್ಗಾ ಲೇಖನ ಯಜ್ಞ ಸಂಕಲ್ಪ ಕಾರ್ಯಕ್ರಮ

ಗೃಹ ನಿರ್ಮಾಣ ಸಹಕಾರ ಸಂಘದ ಸಹಭಾಗಿತ್ವದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಕಾರ್ಯಕ್ರಮವಾದ ನವದುರ್ಗಾ ಲೇಖನಯಜ್ಞದ ಸಂಕಲ್ಪ ಕಾರ್ಯಕ್ರಮವು ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ 18-01-2025 ರಂದು ಜರಗಿತು.
ವಿವಿಧ ಸಹಕಾರ ಸಂಸ್ಥೆಗಳ 9 ಸ್ತ್ರೀಯರು ನವದೀಪವನ್ನು ಪ್ರಜ್ವಲಿಸಿ ದೇವಿಗೆ ಆರತಿ ಬೆಳಗಿಸಿದರು. ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮನೋಹರ್ ಎಸ್. ಶೆಟ್ಟಿಯವರು ಪವಾಡ ಸದೃಶ ರೀತಿಯಲ್ಲಿ ಬೆಳಗುತ್ತಿರುವ ಕಾಪು ಮಾರಿಯಮ್ಮನ ಸಾನಿಧ್ಯದ ಕುರಿತು ವಿವರಿಸಿದರು.
ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್‌ರವರು ಲೇಖನ ಯಜ್ಞದ ಕೈಗೊಳ್ಳುವ ವಿಧಾನ ಹಾಗೂ ಅದರ ಫಲದ ಬಗ್ಗೆ ತಿಳಿಸಿದರು. ನವದುರ್ಗಾ ಲೇಖನ ಯಜ್ಞ ಸಮಿತಿ ಮಹಿಳಾ ಮುಖ್ಯ ಸಂಚಾಲಕರಾದ ಗೀತಾಂಜಲಿ ಸುವರ್ಣ, ಉಡುಪಿ ಇಂಡಸ್ಟ್ರೀಯಲ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಹೆಗ್ಡೆ, ಗುರುನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಶೆಟ್ಟಿ ಹಾಗೂ ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಪ್ರಧಾನ ವ್ಯವಸ್ಥಾಪಕಾರದ ಅಶೋಕ್ ಭಟ್, ಈ ಎಲ್ಲಾ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬಡಗಬೆಟ್ಟು ಸೊಸೈಟಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ವಂದಿಸಿದರು.

ಆಧಾರ್ ತಿದ್ದುಪಡಿ ಹಾಗೂ ಹೊಸ ನೋಂದಣಿ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ನೇತೃತ್ವದಲ್ಲಿ ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆ, ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ಅಂಚೆ ಜನಸಂಪರ್ಕ ಅಭಿಯಾನ ಅಡಿಯಲ್ಲಿ ಆಧಾರ್ ತಿದ್ದುಪಡಿ ಮತ್ತು ಹೊಸ ನೋಂದಣಿ ಶಿಬಿರ ಹಾಗೂ ಸಿ.ಎಸ್.ಐ ಲಂಬಾರ್ಡ್ ಮೆಮೋರಿಯಲ್ (ಮಿಷನ್ ಆಸ್ಪತ್ರೆ) ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ಜರಗಿತು. ಉಡುಪಿ ವಿಭಾಗದ ಅಂಚೆ ಅಧೀಕ್ಷಕರಾದ ರಮೇಶ್ ಪ್ರಭುರವರು ಅತಿಥಿಗಳೊಡಗೂಡಿ ಕಾರ್ಯಕ್ರಮ ಉದ್ಘಾಟಿಸಿದರು. ಉಡುಪಿ ದಕ್ಷಿಣ ಉಪ ವಿಭಾಗದ ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠ್ಠಲ ಭಟ್ ಪ್ರಸ್ತಾವನೆಗೈದರು. ಉದ್ಘಾಟನಾ ಸಮಾರಂಭವು ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಉಡುಪಿ ನಗರಸಭೆಯ ಸದಸ್ಯರಾದ ರಮೇಶ್ ಕಾಂಚನ್, ಮಿಷನ್ ಆಸ್ಪತ್ರೆಯ ಸೀನಿಯರ್ ಮೆಡಿಕಲ್ ಆಫೀಸರ್ ಡಾ. ಗಣೇಶ್ ಕಾಮತ್, ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಹೆಲೆನ್ ವಿ ಸಾಲಿನ್ಸ್, ಕ್ರಿಶ್ಚಿಯನ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ವೇತಾ ಶ್ರೀನಿವಾಸ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸೊಸೈಟಿಯ ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್ ಉಪಸ್ಥಿತರಿದ್ದರು. 200ಕ್ಕೂ ಅಧಿಕ ಮಂದಿ ಆಧಾರ್ ತಿದ್ದುಪಡಿ ಹಾಗೂ ಹೊಸ ನೋಂದಣಿ ಅಭಿಯಾನದ ಪ್ರಯೋಜನ ಪಡಕೊಂಡರು. ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 150 ಕ್ಕೂ ಅಧಿಕ ಮಂದಿ ಭಾಗಿಯಾದರು. ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿ, ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ ಕೆ ಕಾರ್ಯಕ್ರಮ ನಿರೂಪಿಸಿದರು. ಸೊಸೈಟಿಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ವಂದಿಸಿದರು.

ಇಂದ್ರಾಳಿ ಆರೋಗ್ಯ ತಪಾಸಣಾ ಶಿಬಿರ

ನಮ್ಮ ಸಂಘ, ಪ್ರಗತಿ ಯುವಕ ಸಂಘ ಇಂದ್ರಾಳಿ ಹಾಗೂ ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಸ್ಕೂಲಲ್ಲಿ ಜರಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಡಗಬೆಟ್ಟು ಸೊಸೈಟಿಗೆ 9ನೇ ಬಾರಿಗೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

ಮಂಗಳೂರಿನಲ್ಲಿ ಜರಗಿದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಸಾಧನೆಗಾಗಿ 9ನೇ ಬಾರಿಗೆ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದಿರುತ್ತದೆ. ಸಂಘದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿಯವರು ಗಣ್ಯರ ಸಮಕ್ಷಮ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಸಚಿವರಾದ ಶ್ರೀ ಕೆ.ಎನ್ ರಾಜಣ್ಣ, ರಾಜ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಜಿ ಟಿ ದೇವೇಗೌಡ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಶಾಸಕರಾದ ವೈ ಭರತ್ ಶೆಟ್ಟಿ, ಯಶ್ಪಾಲ್ ಸುವರ್ಣ, ದ.ಕ ಜಿಲ್ಲಾ ಸಹಕಾರ ಯೂನಿನನ್ನ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆ.ಎಂ.ಎಫ್ ಅಧ್ಯಕ್ಷರಾದ ಶ್ರೀ ಕೆ.ಪಿ ಸುಚರಿತ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಂಡಳಿ ಸದಸ್ಯರು ಹಾಗೂ ಇತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಪ್ತಾಹ ಧ್ವಜಾರೋಹಣ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 71 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಧ್ವಜಾರೋಹಣ ನೆರವೇರಿಸಿದರು. ಎಂ.ಜಿ.ಎಂ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಸಂಘದ ಆಡಳಿತ ಮಂಡಳಿ ಸದಸ್ಯರು. ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿ, ಶಾಖಾ ವ್ಯವಸ್ಥಾಪಕರಾದ ನವೀನ್ ಕೆ. ವಂದಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಸ್ವಚ್ಛತಾ ಕಾರ್ಯಕ್ರಮ

ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಇಂದು ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮವು ಉಡುಪಿ ನಗರ ಪೊಲೀಸ್ ಠಾಣೆ ಮುಂಭಾಗ, ಮಿಷನ್ ರಸ್ತೆಯ ಎರಡು ಬದಿಯ ರಸ್ತೆಯ ಪರಿಸರವನ್ನು ಸ್ವಚ್ಛಗೊಳಿಸಲಾಯಿತು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಬಡಗುಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ರವರ ನೇತೃತ್ವದಲ್ಲಿ ನೆಡೆಯಿತು, ಸಂಸ್ಥೆಯ ನಿರ್ದೇಶಕರಾದ ಎಲ್ ಉಮಾನಾಥ , ಶ್ರೀಮತಿ ಜಯ ಶೆಟ್ಟಿ , ಜನರಲ್ ಮೆನೇಜರ್ ರಾಜೇಶ್ ಶೇರಿಗಾರ್, AGM ಪ್ರವೀಣ್ ಕುಮಾರ್, ವಿವಿಧ ಶಾಖೆಯ ಅಧಿಕಾರಿಗಳು ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥರಿದ್ದರು.

15.23 ಕೋ.ರೂ. ನಿವ್ವಳ ಲಾಭ

ಅಕ್ಟೋಬರ್ 02: ಮಹಾತ್ಮಾ ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿಯವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ & ಉಡುಪಿ ಜಿಲ್ಲಾ ಸಮಸ್ತ ಸಹಕಾರಿ ಇವರ ನೇತೃತ್ವದಲ್ಲಿ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ, ಲಿಯೋ ಡಿಸ್ಟಿçಕ್ಟ್ 317 ಸಿ ಮತ್ತು ಕ್ರಿಶ್ಚಿಯನ್ ಪಿ.ಯು ಕಾಲೇಜು, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಚೇತನ ಹಾಗೂ ಲಂಬಾರ್ಡ್ ಮೆಮೋರಿಯಲ್ ಮಿಷನ್ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ 155 ನೇ ಗಾಂಧಿ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಚರಕದ ರಾಟೆಗೆ ನೂಲು ಹಾಕುವ ಮೂಲಕ ಚಾಲನೆ ನೀಡಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರತಿಯೊಬ್ಬರೂ ಬಹಿರಂಗ ಸ್ವಚ್ಛತೆಯ ಜೊತೆಗೆ ಅಂತರಂಗದ ಸ್ವಚ್ಛತೆಯನ್ನು ಹೊಂದಿರಬೇಕು. ಗಾಂಧೀಜಿಯವರ ಆತ್ಮಚರಿತ್ರೆಯನ್ನು ಓದಿದಾಗ ಅವರು ವಿಶ್ವ ನಾಯಕನಾಗಿ ಬೆಳೆಯುವ ಹಂತವನ್ನು ಹಾಗೂ ಇತರರ ಲೇಖನಗಳಲ್ಲಿ ಅವರ ಬದುಕಿನ ಏಳು-ಬೀಳುಗಳನ್ನು ಸಂಕ್ಷಿಪ್ತವಾಗಿ ಗಮನಿಸಿದಾಗ ಒಬ್ಬ ಸಾಮಾನ್ಯ ವ್ಯಕ್ತಿ ಮಹಾತ್ಮರಾಗಿರುವುದನ್ನು ಕಾಣಬಹುದಾಗಿದೆ ಎಂದರು.
ಕೆಲಸಕ್ಕಾಗಿ ವಕೀಲ ವೃತ್ತಿಗೆ ದಕ್ಷಿಣ ಆಫ್ರಿಕಾಗೆ ತೆರಳಿದ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರಿಗೆ ಬ್ರಿಟಿಷರು ನೀಡುತ್ತಿದ್ದ ದಬ್ಬಾಳಿಕೆಯನ್ನು ಮನಗಂಡು ಹೋರಾಟಕ್ಕೆ ಇಳಿದ ಗಾಂಧೀಜಿ, ಬ್ರಿಟಿಷ್ ಅಧಿಕಾರಿಗಳು ಸಾಕಷ್ಟು ತೊಂದರೆ ನೀಡದರೂ ಸಹ ಅದನ್ನೆಲ್ಲಾ ಎದುರಿಸಿ ಹೋರಾಟ ಮಾಡಿ, ನಂತರ ಭಾರತಕ್ಕೆ ಬಂದು ಸ್ವಾತಂತ್ರö್ಯಕ್ಕಾಗಿ ಮುಂಚೂಣಿಯಲ್ಲಿ ನಿಂತ ಇವರು, ಬ್ರಿಟಿಷರು ಯುದ್ಧ ಮಾಡುವ ಸಂದರ್ಭದಲ್ಲಿ ಅಹಿಂಸಾ ಸತ್ಯಾಗ್ರಹವನ್ನು ಮಾಡಿ ಬ್ರಿಟಿಷರನ್ನು ಸೋಲಿಸುವ ಮೂಲಕ ಸ್ವಾತಂತ್ರö್ಯ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಿದ್ದರು. ಸ್ವಚ್ಛತಾ ಕಾರ್ಯಗಳು ಕೇವಲ ಅವರ ದಿನಾಚರಣೆಗೆ ಮಾತ್ರ ಸೀಮಿತವಾಗಿರದೇ, ದೈನಂದಿನಗಳಲ್ಲಿಯೂ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಅವರ ಶಿಸ್ತು, ಸಂಯಮ, ಸೇವಾ ಪರಿಕಲ್ಪನೆಯನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕು ಎಂದರು. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಪ್ರಸಾದ್ ರಾವ್ ಎಂ ಉಪನ್ಯಾಸ ನೀಡಿ ಮಾತನಾಡಿ, ಇಂದು ಭಾರತದ ಇತಿಹಾಸದಲ್ಲಿ ವಿಶೇಷವಾದ ದಿನ. ಮಹಾತ್ಮಾ ಗಾಂಧೀಜಿಯವರ ಜಯಂತಿಯ ಜೊತೆಗೆ ಅಂತಾರಾಷ್ರ್ಟೀಯ ಮಟ್ಟದಲ್ಲಿ ಶಾಂತಿ ದಿನ ಹಾಗೂ ದಿಟ್ಟ ನಿರ್ಧಾರಗಳ ಅಸಮಾನ್ಯ ನಾಯಕರಾದ ಲಾಲ್ ಬಹದ್ದೂರು ಶಾಸ್ರ್ತೀಯವರ ಜನ್ಮ ದಿನವೂ ಕೂಡ ಇಂದಾಗಿದ್ದು, ಗಾಂಧೀಜಿಯವರನ್ನು ಪ್ರೀತಿಸಲು ಹಲವಾರು ಕಾರಣಗಳಿವೆ. ಸರ್ವರನ್ನೂ ಸಮಾನ ರೀತಿಯಲ್ಲಿ ಕಾಣುವುದರೊಂದಿಗೆ ಸಮಾಜದಲ್ಲಿ ಮೇಲು-ಕೀಳು ಎಂಬ ಭಾವವನ್ನು ಹೋಗಲಾಡಿಸಲು ಶ್ರಮಿಸಿದರು. ವ್ಯಕ್ತಿಯನ್ನು ಗೌರವಿಸಿದರೆ, ದೇವರನ್ನು ಗೌರವಿಸಿದಂತೆ ಎಂಬ ಮನೋಭಾವ ಹೊಂದಿದ್ದ ಅವರು, ಹೋರಾಟವನ್ನು ಹಿಂಸಾ ಮಾರ್ಗವನ್ನು ಹೊರತುಪಡಿಸಿಯೂ ಅಹಿಂಸಾ ಮಾರ್ಗ, ಶಾಂತಿಯ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುತ್ತಿದ್ದರು ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಚಿಂತನೆಗಳನ್ನು ಪಾಲಿಸುವುದರೊಂದಿಗೆ ಅವುಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳುವ ದೃಢ ನಿರ್ಧಾರ ಕೈಗೊಂಡು, ಯಶಸ್ವಿ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀ ಜಯಂತಿ ಅಂಗವಾಗಿ ಪ್ರೌಢ ಶಾಲಾ ವಿಭಾಗ, ಪದವಿ ಪೂರ್ವ ವಿಭಾಗ ಹಾಗೂ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ ವಿಭಾಗದ ಸಾಕ್ಷಿ ಕುಲಾಲ್ ಪ್ರಥಮ, ಮೈತ್ರಿ ದ್ವಿತೀಯ ಹಾಗೂ ಶಿವಾನಿ ತೃತೀಯ ಸ್ಥಾನ, ಪದವಿ ಪೂರ್ವ ಶಿಕ್ಷಣ ವಿಭಾಗದ ರಕ್ಷಿತಾ ಭಟ್ ಪ್ರಥಮ, ಪನ್ನಿಧಿ ಡಿ. ಶೆಟ್ಟಿ ದ್ವಿತೀಯ ಹಾಗೂ ದಿವ್ಯ ತೃತೀಯ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ಭೀಮಾಂಬಿಕಾ ಪ್ರಥಮ, ಅಮಿಷಾ ದ್ವಿತೀಯ ಹಾಗೂ ಅಶ್ವಿನಿ ಡಿ.ಎಸ್ ತೃತೀಯ ಸ್ಥಾನ ಇವರಿಗೆ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು ಹಾಗೂ ಗಾಂಧೀಜಿಯವರ ಸವಿನೆನಪುಗಳ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್ಪಿ ಎಸ್. ಟಿ ಸಿದ್ದಲಿಂಗಪ್ಪ, ಲಯನ್ಸ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್, ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಕೃಷ್ಣಯ್ಯ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಶೇರಿಗಾರ್, ಲಯನ್ಸ್ ಕ್ಲಬ್ ಉಡುಪಿ ಚೇತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಖಾ;ರಿಗಳು, ಸಿಬ್ಬಂದಿಗಳು, ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪೌರಾಯುಕ್ತ ರಾಯಪ್ಪ ಸ್ವಾಗತಿಸಿದರೆ, ದಯಾನಂದ ನಿರೂಪಿಸಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 7 ಗಂಟೆಗೆ ಜಿಲ್ಲಾಡಳಿತ ಹಾಗೂ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೆಳಗ್ಗೆ 8.30 ಕ್ಕೆ ನಗರದ ಪ್ರಮುಖ ಬೀದಿಗಳ ಮೂಲಕ ಸ್ವಚ್ಛತಾ ನಡಿಗೆ ಜಾಥಾವು ಸರ್ವೀಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ನಿಂದ ಅಜ್ಜರಕಾಡಿನ ಪುರಭವನದ ವರೆಗೆ ನಡೆಯಿತು. ಜಾಥಾದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ನ ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ, ಸ್ವಚ್ಛತೆಯ ಘೋಷ ವಾಕ್ಯಗಳನ್ನು ದಾರಿಯುದ್ದಕ್ಕೂ ಸಾರಿದರು. ನಂತರ ಅಜ್ಜರಕಾಡು ಭುಜಂಗ ಶೆಟ್ಟಿ ಪಾರ್ಕ್ನ ಗಾಂಧಿ ಕಟ್ಟೆಯ ಬಳಿಯ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.