Badagabettu Society

ಗಾಂಧೀ ಜಯಂತಿ ಜಾಥಾ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2023-24ನೆ ಸಾಲಿನಲ್ಲಿ 15.23ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ. ಉಡುಪಿ ಅಜ್ಜರಕಾಡು ಪುರಭವನದಲ್ಲಿ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 18,309 ಸದಸ್ಯರಿಂದ 4.77ಕೋಟಿ ರೂ. ಪಾಲು ಬಂಡವಾಳ ಹಾಗೂ 509.55 ಕೋಟಿ ರೂ. ಠೇವಣಿ ಹೊಂದಿದ್ದು, 402.12 ಕೋಟಿ ರೂ. ಹೊರ ಬಾಕಿ ಸಾಲ ಹೊಂದಿದೆ. ಈ ಮೂಲಕ ಸಂಘವು 2023-24ನೇ ಸಾಲಿನಲ್ಲಿ ಸುಮಾರು 2500ಕೋಟಿ ರೂ.ಗೂ ಮೇಲ್ಪಟ್ಟು ವಾರ್ಷಿಕ ವಹಿವಾಟು ನಡೆಸಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭೆಯ ಆಯ್ದ 24 ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಜಾರ್ಜ್ ಸ್ಯಾಮುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್.ಉಮಾನಾಥ, ಪುರುಷೋತ್ತಮ ಶೆಟ್ಟಿ, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಪದ್ಮನಾಭ ಕೆ.ನಾಯಕ್, ಸದಾಶಿವ ನಾಯ್ಕಿ, ಮನೋಹರ್ ಎಸ್.ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿ ಎಸ್.ಭಟ್ ಉಪಸ್ಥಿತರಿದ್ದರು. ಸಂಘದ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.

ವಿಜೇತ ವಿಶೇಷ ಶಾಲೆಯಲ್ಲಿ, “ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ – 2024

ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ನಿವೃತ್ತಿ ಹೊಂದಿದ ಅರುಣ್ ಕುಮಾರ್ ಎಸ್.ವಿ. ಅವರನ್ನು ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಗೌರವಾಭಿನಂದನೆ ಕಾರ್ಯಕ್ರಮವು ನಗರದ ಅಜ್ಜರಕಾಡು ಪುರಭವನ ಮಿನಿಹಾಲ್ನಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ, ಕೆ.ಎಂ.ಎಫ್. ನಿರ್ದೇಶಕ ರವಿರಾಜ್ ಹೆಗ್ಡೆ ಅವರು ಆಗಮಿಸಿದ್ದರು. ಇದೇ ಸಂದರ್ಭ ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿಯ ಮುಖ್ಯ ಆಯುಕ್ತರಾಗಿ ನೇಮಕಗೊಂಡ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಭಿನಂದನಾ ಕಾರ್ಯಕ್ರಮದ ಮುಂಚಿತವಾಗಿ ಸಂಘದ ಸಿಬ್ಬಂದಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ಎಂ. ಡಿ. ವಿಶ್ವನಾಥ ನಾಯರ್ ಅವರಿಂದ ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ಕಾರ್ಯಕ್ರಮ ನೆರವೇರಿತು. ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿದರು. ಉಪಮಹಾಪ್ರಬಂಧಕ ಪ್ರವೀಣ್ ಕುಮಾರ್ ಅವರು ನಿವೃತ್ತ ಅರುಣ್ ಕುಮಾರ್ ಎಸ್.ವಿ. ಅವರ ಅಭಿನಂದನಾ ಭಾಷಣ ಮಾಡಿದರು. ಸಂಘದ ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್ ವಂದಿಸಿದರು.

ರಕ್ಷಾಬಂಧನ

ನಮ್ಮ ಸಂಘ ಹಾಗೂ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಉಡುಪಿ ಅಜ್ಜರಕಾಡು ಕೇಂದ್ರದ ಸಹಭಾಗಿತ್ವದಲ್ಲಿ ಸಂಘದ ಜಗನ್ನಾಥ ಸಭಾಭವನದಲ್ಲಿ ರಕ್ಷಾಬಂಧನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಬ್ರಹ್ಮಾಕುಮಾರಿ ಸುಮಾರವರು ರಕ್ಷಾಬಂಧನದ ಮಹತ್ವ ಸಾರುವ ಸಂದೇಶ ನೀಡಿದರು. ನೆರೆದಿದ್ದವರಿಗೆ ರಾಖಿ ಕಟ್ಟುವುದರೊಂದಿಗೆ ಸಿಹಿತಿಂಡಿ ವಿತರಿಸಲಾಯಿತು. ಸಂಘದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಉಡುಪಿ ಅಜ್ಜರಕಾಡು ಕೇಂದ್ರದ ವೈ.ಮೋಹನ್, ರತ್ನಾಕರ ಕಿಣಿ, ರಘುರಾಮ್, ಸಂಘದ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ಶೇರಿಗಾರ್ ಸ್ವಾಗತಿಸಿ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಇಂದ್ರಾಳಿ ಜಯಕರ ಶೆಟ್ಟಿಯವರ ಅಧ್ಯಕ್ಷತೆಯ ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ಗೆ ಸತತ 18ನೇ ಬಾರಿಗೆ ಸಾಧನಾ ಪ್ರಶಸ್ತಿ.

ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ನಿ. ಉಡುಪಿ ಇದರ 2023-24ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 18 ಬಾರಿ ಹಾಗೂ ಸಂಸ್ಥೆಯು 2023/24 ವರದಿ ವರ್ಷದಲ್ಲಿ 500 ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹಣೆಗಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಕೊಡಲ್ಪಡುವ ಚಿನ್ನದ ಪದಕ ಲಭಿಸಿದೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಹಾಗೂ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಶೇರಿಗಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ಸಂದರ್ಬದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಜಾರ್ಜ್ ಸ್ಯಾಮ್ಯುವೆಲ್ ,ಆಡಳಿತ ಮಂಡಳಿಯ ಸದಸ್ಯರು, ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

ಸೇವಾನಿವೃತ್ತ ಅರುಣ್ ಎಸ್.ವಿ.ಗೆ ಗೌರವಾಭಿನಂದನೆ

ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ನಿವೃತ್ತಿ ಹೊಂದಿದ ಅರುಣ್ ಕುಮಾರ್ ಎಸ್.ವಿ. ಅವರನ್ನು ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಗೌರವಾಭಿನಂದನೆ ಕಾರ್ಯಕ್ರಮವು ನಗರದ ಅಜ್ಜರಕಾಡು ಪುರಭವನ ಮಿನಿಹಾಲ್ನಲ್ಲಿ ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ, ಕೆ.ಎಂ.ಎಫ್. ನಿರ್ದೇಶಕ ರವಿರಾಜ್ ಹೆಗ್ಡೆ ಅವರು ಆಗಮಿಸಿದ್ದರು. ಇದೇ ಸಂದರ್ಭ ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿಯ ಮುಖ್ಯ ಆಯುಕ್ತರಾಗಿ ನೇಮಕಗೊಂಡ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಭಿನಂದನಾ ಕಾರ್ಯಕ್ರಮದ ಮುಂಚಿತವಾಗಿ ಸಂಘದ ಸಿಬ್ಬಂದಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ಎಂ. ಡಿ. ವಿಶ್ವನಾಥ ನಾಯರ್ ಅವರಿಂದ ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ಕಾರ್ಯಕ್ರಮ ನೆರವೇರಿತು.
ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿದರು. ಉಪಮಹಾಪ್ರಬಂಧಕ ಪ್ರವೀಣ್ ಕುಮಾರ್ ಅವರು ನಿವೃತ್ತ ಅರುಣ್ ಕುಮಾರ್ ಎಸ್.ವಿ. ಅವರ ಅಭಿನಂದನಾ ಭಾಷಣ ಮಾಡಿದರು. ಸಂಘದ ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್ ವಂದಿಸಿದರು.

ಸುಮಾರು 12.00 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ, ಶೈಕ್ಷಣಿಕ ಪರಿಕಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ

ಸಹಕಾರ ಕ್ಷೇತ್ರದಲ್ಲಿ ಸಾಧನೆಗೆ ಹೆಸರಾಗಿ, ಸತತ ಸಾಧನೆಯನ್ನು ಮಾಡುತ್ತಲೇ ಸಮಾಜದ ಎಲ್ಲಾ ವರ್ಗಗಳ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ವಿವಿಧ ಸಾಮಾಜಿಕ, ಆರ್ಥಿಕ ಸೇವೆಗಳನ್ನು ನಿಸ್ವಾರ್ಥ ಮನೋಭಾವನೆಯೊಂದಿಗೆ, ಜವಾಬ್ದಾರಿಯುತ ಕಾರ್ಯವೈಖರಿಯೊಂದಿಗೆ ನಿರ್ವಹಿಸಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ಶತಮಾನೋತ್ಸವವನ್ನು ಯಶಸ್ವಿಯಾಗಿ ಪೂರೈಸಿ ಮುನ್ನಡೆಯುತ್ತಿರುವ ಉಡುಪಿಯ ಪ್ರತಿಷ್ಠಿತ ಸಹಕಾರ ಸಂಘ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾÊಟಿ ಲಿಮಿಟೆಡ್.
ಪುಸ್ತಕದಲ್ಲಿರುವ ಪಠ್ಯವನ್ನು ಓದಿ ಅಂಕ ಗಳಿಸುವುದು ಅನಿವಾರ್ಯವಾದರೂ ಅದರೊಂದಿಗೆ ಜೀವನದಲ್ಲಿ ಉನ್ನತ ಸ್ಥಾನಮಾನ ಗಿಟ್ಟಿಸಿಕೊಳ್ಳಲು ನಿರಂತರ ಕಲಿಕೆ ಅತ್ಯಗತ್ಯ. ಆಧುನಿಕ ಯುಗದಲ್ಲಿ ವಿದ್ಯಾಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಮನೋಭಾವ ಬೆಳೆಸಿಕೊಂಡು ಸುದ್ದಿ ಪತ್ರಿಕೆ, ಸಾಹಿತ್ಯಾದಿ ಪುಸ್ತಕಗಳನ್ನು ಓದಿದಾಗ ಜೀವನಕ್ಕೆ ಬೇಕಾದ ಮೌಲ್ಯ, ಸಾಮರ್ಥ್ಯವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಉಡುಪಿ ಎಎಸ್ಪಿ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು. ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಉಡುಪಿ ಅಜ್ಜರಕಾಡು ಟೌನ್ ಹಾಲ್ನಲ್ಲಿ ದಿನಾಂಕ 22-06-2024 ಶನಿವಾರ ನಡೆದ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ 12 ಲ.ರೂ. ಮೌಲ್ಯಕ್ಕೂ ಮಿಕ್ಕಿದ ನೋಟ್ ಪುಸ್ತ, ಶೈಕ್ಷಣಿಕ ಪರಿಕರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಇರಿಸಿಕೊಂಡು ಆ ನಿಟ್ಟಿನಲ್ಲಿ ಶ್ರಮಿಸಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಕೆ. ಗಣಪತಿಯವರು ಹೇಳಿದರು.