Badagabettu Society

ಇಂದ್ರಾಳಿ ಆರೋಗ್ಯ ತಪಾಸಣಾ ಶಿಬಿರ

ನಮ್ಮ ಸಂಘ, ಪ್ರಗತಿ ಯುವಕ ಸಂಘ ಇಂದ್ರಾಳಿ ಹಾಗೂ ಇತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂದ್ರಾಳಿ ಇಂಗ್ಲಿಷ್ ಮೀಡಿಯಂ ಸ್ಕೂಲಲ್ಲಿ ಜರಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಡಗಬೆಟ್ಟು ಸೊಸೈಟಿಗೆ 9ನೇ ಬಾರಿಗೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

ಮಂಗಳೂರಿನಲ್ಲಿ ಜರಗಿದ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಸಾಧನೆಗಾಗಿ 9ನೇ ಬಾರಿಗೆ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಪಡೆದಿರುತ್ತದೆ. ಸಂಘದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿಯವರು ಗಣ್ಯರ ಸಮಕ್ಷಮ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಹಕಾರ ಸಚಿವರಾದ ಶ್ರೀ ಕೆ.ಎನ್ ರಾಜಣ್ಣ, ರಾಜ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಜಿ ಟಿ ದೇವೇಗೌಡ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್, ಶಾಸಕರಾದ ವೈ ಭರತ್ ಶೆಟ್ಟಿ, ಯಶ್ಪಾಲ್ ಸುವರ್ಣ, ದ.ಕ ಜಿಲ್ಲಾ ಸಹಕಾರ ಯೂನಿನನ್ನ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆ.ಎಂ.ಎಫ್ ಅಧ್ಯಕ್ಷರಾದ ಶ್ರೀ ಕೆ.ಪಿ ಸುಚರಿತ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಮಂಡಳಿ ಸದಸ್ಯರು ಹಾಗೂ ಇತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಪ್ತಾಹ ಧ್ವಜಾರೋಹಣ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 71 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ಧ್ವಜಾರೋಹಣ ನೆರವೇರಿಸಿದರು. ಎಂ.ಜಿ.ಎಂ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ಸಂಘದ ಆಡಳಿತ ಮಂಡಳಿ ಸದಸ್ಯರು. ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿ, ಶಾಖಾ ವ್ಯವಸ್ಥಾಪಕರಾದ ನವೀನ್ ಕೆ. ವಂದಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಸ್ವಚ್ಛತಾ ಕಾರ್ಯಕ್ರಮ

ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಇಂದು ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮವು ಉಡುಪಿ ನಗರ ಪೊಲೀಸ್ ಠಾಣೆ ಮುಂಭಾಗ, ಮಿಷನ್ ರಸ್ತೆಯ ಎರಡು ಬದಿಯ ರಸ್ತೆಯ ಪರಿಸರವನ್ನು ಸ್ವಚ್ಛಗೊಳಿಸಲಾಯಿತು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹಾಗೂ ಬಡಗುಬೆಟ್ಟು ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ರವರ ನೇತೃತ್ವದಲ್ಲಿ ನೆಡೆಯಿತು, ಸಂಸ್ಥೆಯ ನಿರ್ದೇಶಕರಾದ ಎಲ್ ಉಮಾನಾಥ , ಶ್ರೀಮತಿ ಜಯ ಶೆಟ್ಟಿ , ಜನರಲ್ ಮೆನೇಜರ್ ರಾಜೇಶ್ ಶೇರಿಗಾರ್, AGM ಪ್ರವೀಣ್ ಕುಮಾರ್, ವಿವಿಧ ಶಾಖೆಯ ಅಧಿಕಾರಿಗಳು ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥರಿದ್ದರು.

15.23 ಕೋ.ರೂ. ನಿವ್ವಳ ಲಾಭ

ಅಕ್ಟೋಬರ್ 02: ಮಹಾತ್ಮಾ ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿಯವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ & ಉಡುಪಿ ಜಿಲ್ಲಾ ಸಮಸ್ತ ಸಹಕಾರಿ ಇವರ ನೇತೃತ್ವದಲ್ಲಿ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ, ಲಿಯೋ ಡಿಸ್ಟಿçಕ್ಟ್ 317 ಸಿ ಮತ್ತು ಕ್ರಿಶ್ಚಿಯನ್ ಪಿ.ಯು ಕಾಲೇಜು, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಚೇತನ ಹಾಗೂ ಲಂಬಾರ್ಡ್ ಮೆಮೋರಿಯಲ್ ಮಿಷನ್ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ 155 ನೇ ಗಾಂಧಿ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಚರಕದ ರಾಟೆಗೆ ನೂಲು ಹಾಕುವ ಮೂಲಕ ಚಾಲನೆ ನೀಡಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರತಿಯೊಬ್ಬರೂ ಬಹಿರಂಗ ಸ್ವಚ್ಛತೆಯ ಜೊತೆಗೆ ಅಂತರಂಗದ ಸ್ವಚ್ಛತೆಯನ್ನು ಹೊಂದಿರಬೇಕು. ಗಾಂಧೀಜಿಯವರ ಆತ್ಮಚರಿತ್ರೆಯನ್ನು ಓದಿದಾಗ ಅವರು ವಿಶ್ವ ನಾಯಕನಾಗಿ ಬೆಳೆಯುವ ಹಂತವನ್ನು ಹಾಗೂ ಇತರರ ಲೇಖನಗಳಲ್ಲಿ ಅವರ ಬದುಕಿನ ಏಳು-ಬೀಳುಗಳನ್ನು ಸಂಕ್ಷಿಪ್ತವಾಗಿ ಗಮನಿಸಿದಾಗ ಒಬ್ಬ ಸಾಮಾನ್ಯ ವ್ಯಕ್ತಿ ಮಹಾತ್ಮರಾಗಿರುವುದನ್ನು ಕಾಣಬಹುದಾಗಿದೆ ಎಂದರು.
ಕೆಲಸಕ್ಕಾಗಿ ವಕೀಲ ವೃತ್ತಿಗೆ ದಕ್ಷಿಣ ಆಫ್ರಿಕಾಗೆ ತೆರಳಿದ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರಿಗೆ ಬ್ರಿಟಿಷರು ನೀಡುತ್ತಿದ್ದ ದಬ್ಬಾಳಿಕೆಯನ್ನು ಮನಗಂಡು ಹೋರಾಟಕ್ಕೆ ಇಳಿದ ಗಾಂಧೀಜಿ, ಬ್ರಿಟಿಷ್ ಅಧಿಕಾರಿಗಳು ಸಾಕಷ್ಟು ತೊಂದರೆ ನೀಡದರೂ ಸಹ ಅದನ್ನೆಲ್ಲಾ ಎದುರಿಸಿ ಹೋರಾಟ ಮಾಡಿ, ನಂತರ ಭಾರತಕ್ಕೆ ಬಂದು ಸ್ವಾತಂತ್ರö್ಯಕ್ಕಾಗಿ ಮುಂಚೂಣಿಯಲ್ಲಿ ನಿಂತ ಇವರು, ಬ್ರಿಟಿಷರು ಯುದ್ಧ ಮಾಡುವ ಸಂದರ್ಭದಲ್ಲಿ ಅಹಿಂಸಾ ಸತ್ಯಾಗ್ರಹವನ್ನು ಮಾಡಿ ಬ್ರಿಟಿಷರನ್ನು ಸೋಲಿಸುವ ಮೂಲಕ ಸ್ವಾತಂತ್ರö್ಯ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಿದ್ದರು. ಸ್ವಚ್ಛತಾ ಕಾರ್ಯಗಳು ಕೇವಲ ಅವರ ದಿನಾಚರಣೆಗೆ ಮಾತ್ರ ಸೀಮಿತವಾಗಿರದೇ, ದೈನಂದಿನಗಳಲ್ಲಿಯೂ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಅವರ ಶಿಸ್ತು, ಸಂಯಮ, ಸೇವಾ ಪರಿಕಲ್ಪನೆಯನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕು ಎಂದರು. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಪ್ರಸಾದ್ ರಾವ್ ಎಂ ಉಪನ್ಯಾಸ ನೀಡಿ ಮಾತನಾಡಿ, ಇಂದು ಭಾರತದ ಇತಿಹಾಸದಲ್ಲಿ ವಿಶೇಷವಾದ ದಿನ. ಮಹಾತ್ಮಾ ಗಾಂಧೀಜಿಯವರ ಜಯಂತಿಯ ಜೊತೆಗೆ ಅಂತಾರಾಷ್ರ್ಟೀಯ ಮಟ್ಟದಲ್ಲಿ ಶಾಂತಿ ದಿನ ಹಾಗೂ ದಿಟ್ಟ ನಿರ್ಧಾರಗಳ ಅಸಮಾನ್ಯ ನಾಯಕರಾದ ಲಾಲ್ ಬಹದ್ದೂರು ಶಾಸ್ರ್ತೀಯವರ ಜನ್ಮ ದಿನವೂ ಕೂಡ ಇಂದಾಗಿದ್ದು, ಗಾಂಧೀಜಿಯವರನ್ನು ಪ್ರೀತಿಸಲು ಹಲವಾರು ಕಾರಣಗಳಿವೆ. ಸರ್ವರನ್ನೂ ಸಮಾನ ರೀತಿಯಲ್ಲಿ ಕಾಣುವುದರೊಂದಿಗೆ ಸಮಾಜದಲ್ಲಿ ಮೇಲು-ಕೀಳು ಎಂಬ ಭಾವವನ್ನು ಹೋಗಲಾಡಿಸಲು ಶ್ರಮಿಸಿದರು. ವ್ಯಕ್ತಿಯನ್ನು ಗೌರವಿಸಿದರೆ, ದೇವರನ್ನು ಗೌರವಿಸಿದಂತೆ ಎಂಬ ಮನೋಭಾವ ಹೊಂದಿದ್ದ ಅವರು, ಹೋರಾಟವನ್ನು ಹಿಂಸಾ ಮಾರ್ಗವನ್ನು ಹೊರತುಪಡಿಸಿಯೂ ಅಹಿಂಸಾ ಮಾರ್ಗ, ಶಾಂತಿಯ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುತ್ತಿದ್ದರು ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಚಿಂತನೆಗಳನ್ನು ಪಾಲಿಸುವುದರೊಂದಿಗೆ ಅವುಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳುವ ದೃಢ ನಿರ್ಧಾರ ಕೈಗೊಂಡು, ಯಶಸ್ವಿ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀ ಜಯಂತಿ ಅಂಗವಾಗಿ ಪ್ರೌಢ ಶಾಲಾ ವಿಭಾಗ, ಪದವಿ ಪೂರ್ವ ವಿಭಾಗ ಹಾಗೂ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ ವಿಭಾಗದ ಸಾಕ್ಷಿ ಕುಲಾಲ್ ಪ್ರಥಮ, ಮೈತ್ರಿ ದ್ವಿತೀಯ ಹಾಗೂ ಶಿವಾನಿ ತೃತೀಯ ಸ್ಥಾನ, ಪದವಿ ಪೂರ್ವ ಶಿಕ್ಷಣ ವಿಭಾಗದ ರಕ್ಷಿತಾ ಭಟ್ ಪ್ರಥಮ, ಪನ್ನಿಧಿ ಡಿ. ಶೆಟ್ಟಿ ದ್ವಿತೀಯ ಹಾಗೂ ದಿವ್ಯ ತೃತೀಯ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ಭೀಮಾಂಬಿಕಾ ಪ್ರಥಮ, ಅಮಿಷಾ ದ್ವಿತೀಯ ಹಾಗೂ ಅಶ್ವಿನಿ ಡಿ.ಎಸ್ ತೃತೀಯ ಸ್ಥಾನ ಇವರಿಗೆ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು ಹಾಗೂ ಗಾಂಧೀಜಿಯವರ ಸವಿನೆನಪುಗಳ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್ಪಿ ಎಸ್. ಟಿ ಸಿದ್ದಲಿಂಗಪ್ಪ, ಲಯನ್ಸ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್, ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಕೃಷ್ಣಯ್ಯ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಶೇರಿಗಾರ್, ಲಯನ್ಸ್ ಕ್ಲಬ್ ಉಡುಪಿ ಚೇತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಖಾ;ರಿಗಳು, ಸಿಬ್ಬಂದಿಗಳು, ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪೌರಾಯುಕ್ತ ರಾಯಪ್ಪ ಸ್ವಾಗತಿಸಿದರೆ, ದಯಾನಂದ ನಿರೂಪಿಸಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 7 ಗಂಟೆಗೆ ಜಿಲ್ಲಾಡಳಿತ ಹಾಗೂ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೆಳಗ್ಗೆ 8.30 ಕ್ಕೆ ನಗರದ ಪ್ರಮುಖ ಬೀದಿಗಳ ಮೂಲಕ ಸ್ವಚ್ಛತಾ ನಡಿಗೆ ಜಾಥಾವು ಸರ್ವೀಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ನಿಂದ ಅಜ್ಜರಕಾಡಿನ ಪುರಭವನದ ವರೆಗೆ ನಡೆಯಿತು. ಜಾಥಾದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ನ ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ, ಸ್ವಚ್ಛತೆಯ ಘೋಷ ವಾಕ್ಯಗಳನ್ನು ದಾರಿಯುದ್ದಕ್ಕೂ ಸಾರಿದರು. ನಂತರ ಅಜ್ಜರಕಾಡು ಭುಜಂಗ ಶೆಟ್ಟಿ ಪಾರ್ಕ್ನ ಗಾಂಧಿ ಕಟ್ಟೆಯ ಬಳಿಯ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.

ಗಾಂಧೀ ಜಯಂತಿ ಜಾಥಾ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2023-24ನೆ ಸಾಲಿನಲ್ಲಿ 15.23ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ. ಉಡುಪಿ ಅಜ್ಜರಕಾಡು ಪುರಭವನದಲ್ಲಿ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 18,309 ಸದಸ್ಯರಿಂದ 4.77ಕೋಟಿ ರೂ. ಪಾಲು ಬಂಡವಾಳ ಹಾಗೂ 509.55 ಕೋಟಿ ರೂ. ಠೇವಣಿ ಹೊಂದಿದ್ದು, 402.12 ಕೋಟಿ ರೂ. ಹೊರ ಬಾಕಿ ಸಾಲ ಹೊಂದಿದೆ. ಈ ಮೂಲಕ ಸಂಘವು 2023-24ನೇ ಸಾಲಿನಲ್ಲಿ ಸುಮಾರು 2500ಕೋಟಿ ರೂ.ಗೂ ಮೇಲ್ಪಟ್ಟು ವಾರ್ಷಿಕ ವಹಿವಾಟು ನಡೆಸಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ನಗರಸಭೆಯ ಆಯ್ದ 24 ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಜಾರ್ಜ್ ಸ್ಯಾಮುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್.ಉಮಾನಾಥ, ಪುರುಷೋತ್ತಮ ಶೆಟ್ಟಿ, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಪದ್ಮನಾಭ ಕೆ.ನಾಯಕ್, ಸದಾಶಿವ ನಾಯ್ಕಿ, ಮನೋಹರ್ ಎಸ್.ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿ ಎಸ್.ಭಟ್ ಉಪಸ್ಥಿತರಿದ್ದರು. ಸಂಘದ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.

ವಿಜೇತ ವಿಶೇಷ ಶಾಲೆಯಲ್ಲಿ, “ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ – 2024

ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ನಿವೃತ್ತಿ ಹೊಂದಿದ ಅರುಣ್ ಕುಮಾರ್ ಎಸ್.ವಿ. ಅವರನ್ನು ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಗೌರವಾಭಿನಂದನೆ ಕಾರ್ಯಕ್ರಮವು ನಗರದ ಅಜ್ಜರಕಾಡು ಪುರಭವನ ಮಿನಿಹಾಲ್ನಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ, ಕೆ.ಎಂ.ಎಫ್. ನಿರ್ದೇಶಕ ರವಿರಾಜ್ ಹೆಗ್ಡೆ ಅವರು ಆಗಮಿಸಿದ್ದರು. ಇದೇ ಸಂದರ್ಭ ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿಯ ಮುಖ್ಯ ಆಯುಕ್ತರಾಗಿ ನೇಮಕಗೊಂಡ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಭಿನಂದನಾ ಕಾರ್ಯಕ್ರಮದ ಮುಂಚಿತವಾಗಿ ಸಂಘದ ಸಿಬ್ಬಂದಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ಎಂ. ಡಿ. ವಿಶ್ವನಾಥ ನಾಯರ್ ಅವರಿಂದ ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ಕಾರ್ಯಕ್ರಮ ನೆರವೇರಿತು. ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿದರು. ಉಪಮಹಾಪ್ರಬಂಧಕ ಪ್ರವೀಣ್ ಕುಮಾರ್ ಅವರು ನಿವೃತ್ತ ಅರುಣ್ ಕುಮಾರ್ ಎಸ್.ವಿ. ಅವರ ಅಭಿನಂದನಾ ಭಾಷಣ ಮಾಡಿದರು. ಸಂಘದ ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್ ವಂದಿಸಿದರು.

ರಕ್ಷಾಬಂಧನ

ನಮ್ಮ ಸಂಘ ಹಾಗೂ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಉಡುಪಿ ಅಜ್ಜರಕಾಡು ಕೇಂದ್ರದ ಸಹಭಾಗಿತ್ವದಲ್ಲಿ ಸಂಘದ ಜಗನ್ನಾಥ ಸಭಾಭವನದಲ್ಲಿ ರಕ್ಷಾಬಂಧನವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಬ್ರಹ್ಮಾಕುಮಾರಿ ಸುಮಾರವರು ರಕ್ಷಾಬಂಧನದ ಮಹತ್ವ ಸಾರುವ ಸಂದೇಶ ನೀಡಿದರು. ನೆರೆದಿದ್ದವರಿಗೆ ರಾಖಿ ಕಟ್ಟುವುದರೊಂದಿಗೆ ಸಿಹಿತಿಂಡಿ ವಿತರಿಸಲಾಯಿತು. ಸಂಘದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ, ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಉಡುಪಿ ಅಜ್ಜರಕಾಡು ಕೇಂದ್ರದ ವೈ.ಮೋಹನ್, ರತ್ನಾಕರ ಕಿಣಿ, ರಘುರಾಮ್, ಸಂಘದ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ವ್ಯವಸ್ಥಾಪಕರಾದ ಶ್ರೀ ರಾಜೇಶ್ ಶೇರಿಗಾರ್ ಸ್ವಾಗತಿಸಿ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಇಂದ್ರಾಳಿ ಜಯಕರ ಶೆಟ್ಟಿಯವರ ಅಧ್ಯಕ್ಷತೆಯ ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ಗೆ ಸತತ 18ನೇ ಬಾರಿಗೆ ಸಾಧನಾ ಪ್ರಶಸ್ತಿ.

ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿ ನಿ. ಉಡುಪಿ ಇದರ 2023-24ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 18 ಬಾರಿ ಹಾಗೂ ಸಂಸ್ಥೆಯು 2023/24 ವರದಿ ವರ್ಷದಲ್ಲಿ 500 ಕೋಟಿಗೂ ಮಿಕ್ಕಿ ಠೇವಣಿ ಸಂಗ್ರಹಣೆಗಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಕೊಡಲ್ಪಡುವ ಚಿನ್ನದ ಪದಕ ಲಭಿಸಿದೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಹಾಗೂ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಶೇರಿಗಾರ್ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ಸಂದರ್ಬದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಜಾರ್ಜ್ ಸ್ಯಾಮ್ಯುವೆಲ್ ,ಆಡಳಿತ ಮಂಡಳಿಯ ಸದಸ್ಯರು, ಸಂಸ್ಥೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

ಸೇವಾನಿವೃತ್ತ ಅರುಣ್ ಎಸ್.ವಿ.ಗೆ ಗೌರವಾಭಿನಂದನೆ

ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ನಿವೃತ್ತಿ ಹೊಂದಿದ ಅರುಣ್ ಕುಮಾರ್ ಎಸ್.ವಿ. ಅವರನ್ನು ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಗೌರವಾಭಿನಂದನೆ ಕಾರ್ಯಕ್ರಮವು ನಗರದ ಅಜ್ಜರಕಾಡು ಪುರಭವನ ಮಿನಿಹಾಲ್ನಲ್ಲಿ ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ, ಕೆ.ಎಂ.ಎಫ್. ನಿರ್ದೇಶಕ ರವಿರಾಜ್ ಹೆಗ್ಡೆ ಅವರು ಆಗಮಿಸಿದ್ದರು. ಇದೇ ಸಂದರ್ಭ ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿಯ ಮುಖ್ಯ ಆಯುಕ್ತರಾಗಿ ನೇಮಕಗೊಂಡ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಂಘದ ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಭಿನಂದನಾ ಕಾರ್ಯಕ್ರಮದ ಮುಂಚಿತವಾಗಿ ಸಂಘದ ಸಿಬ್ಬಂದಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ಎಂ. ಡಿ. ವಿಶ್ವನಾಥ ನಾಯರ್ ಅವರಿಂದ ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ಕಾರ್ಯಕ್ರಮ ನೆರವೇರಿತು.
ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿದರು. ಉಪಮಹಾಪ್ರಬಂಧಕ ಪ್ರವೀಣ್ ಕುಮಾರ್ ಅವರು ನಿವೃತ್ತ ಅರುಣ್ ಕುಮಾರ್ ಎಸ್.ವಿ. ಅವರ ಅಭಿನಂದನಾ ಭಾಷಣ ಮಾಡಿದರು. ಸಂಘದ ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್ ವಂದಿಸಿದರು.