Badagabettu Society

ಫಲಾನುಭವಿಗಳಿಗೆ ಉಚಿತ ನೋಟ್ ಪುಸ್ತಕ , ಆರೋಗ್ಯ ಕಾರ್ಡ್ ಹಾಗೂ ಬೈಸಿಕಲ್ ವಿತರಣಾ ಸಮಾರಂಭ

ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಜರಗಿದ ಸಮಾರಂಭದಲ್ಲಿ ಸುಮಾರು ರೂ. 15 ಲಕ್ಷ ಮೌಲ್ಯದ 50 ಸಾವಿರಕ್ಕಿಂತಲೂ ಅಧಿಕ ನೋಟ್ ಪುಸ್ತಕವನ್ನು ಜಿಲ್ಲೆಯ 100 ಕನ್ನಡ ಮಾಧ್ಯಮ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಯಿತು. ಲಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆ ಇವರೊಂದಿಗೆ ಒಡಂಬಡಿಕೆ ಮಾಡಿಕೊಂಡು ಸಂಘದ ಸದಸ್ಯರಿಗೆ, ಗ್ರಾಹಕರಿಗೆ ಅನುಕೂಲವಾಗುವಂತೆ “ಲಂಬಾರ್ಡ್ ಆರೋಗ್ಯ ಕಾರ್ಡ್”ನ್ನು 1900 ಸದಸ್ಯರಿಗೆ ವಿತರಿಸಲಾಯಿತು. ಡಾ| ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಇದರ ಸಭಾಂಗಣಕ್ಕೆ ಸಂಘದ ವತಿಯಿಂದ 200 ಆಸನಗಳನ್ನು, ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ, ಚೆಂಡ್ಕಳ, ಕೊಡವೂರು ಇವರಿಗೆ ಸಂಘದ ವತಿಯಿಂದ 50 ಆಸನಗ¼ನ್ನು ವಿತರಿಸಲಾಯಿತು. ಅಲ್ಲದೆ ಸಂಘದ ವತಿಯಿಂದ ಆರ್ಥಿಕ ಸಹಾಯ ವಿತರಣಾ ಕಾರ್ಯಕ್ರಮ ನೆರವೆರಿತು. ಗೋ-ಗ್ರೀನ್ ಅಭಿಯಾನದಡಿ ಇಂಧನ ಉಳಿತಾಯ ಹಾಗೂ ಪರಿಸರ ಮಾಲಿನ್ಯ ತಡೆಗೆ ಒತ್ತು ನೀಡುವ ಉದ್ದೇಶದಿಂದ ಸಂಘದ ಸಿಬ್ಬಂದಿಗಳಿಗೆ ಸೈಕಲ್ ವಿತರಿಸುವ ಕಾರ್ಯಕ್ರಮವು ಕೂಡಾ ಜರಗಿತು.

ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಜರಗಿದ ಸಮಾರಂಭದಲ್ಲಿ ಸುಮಾರು ರೂ. 15 ಲಕ್ಷ ಮೌಲ್ಯದ 50 ಸಾವಿರಕ್ಕಿಂತಲೂ ಅಧಿಕ ನೋಟ್ ಪುಸ್ತಕವನ್ನು ಜಿಲ್ಲೆಯ 100 ಕನ್ನಡ ಮಾಧ್ಯಮ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಯಿತು. ಲಂಬಾರ್ಡ್ ಮೆಮೋರಿಯಲ್ (ಮಿಷನ್) ಆಸ್ಪತ್ರೆ ಇವರೊಂದಿಗೆ ಒಡಂಬಡಿಕೆ ಮಾಡಿಕೊಂಡು ಸಂಘದ ಸದಸ್ಯರಿಗೆ, ಗ್ರಾಹಕರಿಗೆ ಅನುಕೂಲವಾಗುವಂತೆ “ಲಂಬಾರ್ಡ್ ಆರೋಗ್ಯ ಕಾರ್ಡ್”ನ್ನು 1900 ಸದಸ್ಯರಿಗೆ ವಿತರಿಸಲಾಯಿತು. ಡಾ| ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಇದರ ಸಭಾಂಗಣಕ್ಕೆ ಸಂಘದ ವತಿಯಿಂದ 200 ಆಸನಗಳನ್ನು, ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ, ಚೆಂಡ್ಕಳ, ಕೊಡವೂರು ಇವರಿಗೆ ಸಂಘದ ವತಿಯಿಂದ 50 ಆಸನಗ¼ನ್ನು ವಿತರಿಸಲಾಯಿತು. ಅಲ್ಲದೆ ಸಂಘದ ವತಿಯಿಂದ ಆರ್ಥಿಕ ಸಹಾಯ ವಿತರಣಾ ಕಾರ್ಯಕ್ರಮ ನೆರವೆರಿತು. ಗೋ-ಗ್ರೀನ್ ಅಭಿಯಾನದಡಿ ಇಂಧನ ಉಳಿತಾಯ ಹಾಗೂ ಪರಿಸರ ಮಾಲಿನ್ಯ ತಡೆಗೆ ಒತ್ತು ನೀಡುವ ಉದ್ದೇಶದಿಂದ ಸಂಘದ ಸಿಬ್ಬಂದಿಗಳಿಗೆ ಸೈಕಲ್ ವಿತರಿಸುವ ಕಾರ್ಯಕ್ರಮವು ಕೂಡಾ ಜರಗಿತು.

ವಿಶ್ವ ಯೋಗ ದಿನಾಚರಣೆ


ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ 4ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವು ಸಂಸ್ಠೆಯ ಸಭಾ ಭವನದಲ್ಲಿ ಸಂಘದ ಸಿಬ್ಬಂದಿಗಳು ಹಾಗೂ ನಿರ್ದೇಶಕ ಮಂಡಳಿ ಸದಸ್ಯರೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮವನ್ನು ಸಂಘದ ಶತಮಾನೋತ್ಸವ ಸಮಿತಿ ಸದಸ್ಯರಾದ ಮಹಮ್ಮದ್ ಮೌಲಾ ಉದ್ಘಾಟಿಸಿದರು. ಯೋಗ ತರಬೇತುದಾರರಾಗಿ ಸತೀಶ್ ಕುಮಾರ್ ಮಲ್ಪೆ, ರಾಘವೇಂದ್ರ , ಹಾಗೂ ಸಂಘದ ನಿರ್ದೆಶಕ ಮಂಡಳಿ ಸದಸ್ಯರುಗಳಾದ ಜಯಶೆಟ್ಟಿ, ಜಯಾನಂದ ಮೈಂದನ್ , ಪದ್ಮನಾಭ ನಾಯಕ್ , ಹಾಗೂ ಪ್ರಧಾನ ವ್ಯವಸ್ಥಾಪಕರಾದ ಜಯಕರ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ

ಕಾರ್ಯಕ್ರಮದಲ್ಲಿ ರೂ. 3.00 ಲಕ್ಷ ಮೌಲ್ಯದ 10 ಸಾವಿರಕ್ಕಿಂತಲೂ ಅಧಿಕ ನೋಟ್ ಪುಸ್ತಕವನ್ನು ಜಿಲ್ಲೆಯ ಹಲವು ಕನ್ನಡ ಮಾಧ್ಯಮ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಯಿತು. ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ಹಾಗೂ ಕನ್ನಡ ಮಾಧ್ಯಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನೂ ವಿತರಿಸಲಾಯಿತು.

ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕಾಗಿ ಸಂಘದ ವತಿಯಿಂದ ದೇಣಿಗೆಯನ್ನು ನೀಡಲಾಗಿದೆ.


ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಶತಮಾನೋತ್ಸವ ಸಂಭ್ರಮಾಚರಣೆಯ ವತಿಯಿಂದ ಪರಿಸರದ ಬಗ್ಗೆ ವಿಶೇಷ ಕಾಳಜಿ ಹೊಂದಿ ಪ್ಲಾಸ್ಟಿಕ್ ಮುಕ್ತ ಅಲೆವೂರು ಗ್ರಾಮ ಎಂಬ ಪರಿಸರ ಸ್ನೇಹಿ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರ ಪ್ರಶಂಶೆಗೆ ಪಾತ್ರವಾದ ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಗೆ ಸಾರ್ವಜನಿಕ ಶೌಚಾಲಯ ನಿರ್ಮಿಸಲು ರೂ. 1 ಲಕ್ಷ ದೇಣಿಗೆಯನ್ನು ಸಂಸ್ಥೆಯ ವತಿಯಿಂದ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕುಂದಾಪುರ ಉಪ-ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಚಂದ್ರಪ್ರತಿಮ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ,ಶತಮಾನೋತ್ಸವ ಸಮಿತಿ ಸಂಚಾಲಕರಾದ ಪುರುಷೋತ್ತಮ ಪಿ. ಶೆಟ್ಟಿ, ಸಂಘದ ಅಧ್ಯಕ್ಷರಾದ ಸಂಜೀವ ಕಾಂಚನ್, ಉಪಾಧ್ಯಕ್ಷ ಎಲ್. ಉಮಾನಾಥ್, ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಲೇಶ್ ಶೆಟ್ಟಿ, ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.

ವಿಶ್ವ ಮಹಿಳಾ ದಿನಾಚರಣೆ

ಸಂಘದ ಪ್ರಯೋಜತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಮಾ 11,2018 ರಂದು ಕಾರ್ಕಳದ ಉಪನ್ಯಾಸಕಿ ಅಕ್ಷಯಾ ಗೋಖಲೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ತಲ್ಲೂರು ಫ್ಯಾಮಿಲಿ ಟ್ರಸ್ಟನ ತಲ್ಲೂರು ಶಿವರಾಮ ಶೆಟ್ಟಿ, ಮಲ್ಪೆ ಲಯನ್ಸ್ ಕ್ಲಬ್ ನ ಆಧ್ಯಕ್ಷೆ ಗಿರಿಜಾ ಶಿವರಾಮ ಶೆಟ್ಟಿ, ಶಂಕರಪುರ ಬಂಟರ ಮಹಿಳಾ ವೇದಿಕೆ ಅಧ್ಯಕ್ಷೆ ವೀಣಾ ಶೆಟ್ಟಿ, ಮಹಿಳಾ ಮಂಡಳಿಗಳ ಒಕ್ಕೂಟದ ವಸಂತಿ ರಾವ್ ಕೊರಡ್ಕಲ್, ರಾಧಾ ದಾಸ್, ಮಮತಾ ಎಸ್. ಶೆಟ್ಟಿ, ಗೀತಾ ರವಿ ಉಪಸ್ಥಿತರಿದ್ದರು

ಬಿ.ಸಿ.ಸಿ.ಎಸ್ ಶತಮಾನೋತ್ಸವ ಮ್ಯಾರಾಥಾನ್ 10ಕೆ-2018

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಸಹಕಾರಿ ಕ್ಷೇತ್ರದ ಇತಿಹಾಸದಲ್ಲೆ ಪ್ರಪ್ರಥಮವಾಗಿ ಯುವಜನತೆಯಲ್ಲಿ ಮಾದಕ ದ್ರವ್ಯ ವ್ಯಸನದಿಂದಾಗುವ ದುಷ್ಪರಿಣಾಮದ ಅರಿವು ಮೂಡಿಸಲು ಹಾಗೂ ಸ್ವಚ್ಛತಾ ಅಭಿಯಾನದ ಅಂಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಸರ್ವರಿಗೆ ಹಾಗೂ ಸಹಕಾರ ಸಂಘಗಳ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ಬಿ.ಸಿ.ಸಿ.ಎಸ್ ಶತಮಾನೋತ್ಸವ ಮ್ಯಾರಥಾನ್ 10 ಕೆ 2018 ನ್ನು ಅಂತಾರಾಷ್ಟ್ರೀಯ ಕ್ರೀಡಾ ಪಟು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಚಾಲನೆ ನೀಡಿ ಶುಭ ಹಾರೈಸಿದರು.
ಸ್ಪರ್ದೆಯು 5 ವಿಭಾಗಗಳಲ್ಲಿ ನಡೆದಿದ್ದು ಸುಮಾರು 1200 ಕ್ರೀಡಾಳುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಅಪರ ಜಿಲ್ಲಾಧಿಕಾರಿ ಅನುರಾಧ ಜಿ, ಮಾಜಿ ಶಾಸಕ ರಘುಪತಿ ಭಟ್, ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ. ನಾಯಕ್, ಸಹಕಾರಿ ಯುನಿಯನ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ದಿನೇಶ್ ಪುತ್ರನ್, ಮಾಹೆ ಮಣಿಪಾಲದ ಕ್ರೀಡಾ ಕಾರ್ಯದರ್ಶಿ ಡಾ| ವಿನೋದ್ ನಾಯಕ್, ಉಡುಪಿ ಜಿಲ್ಲಾ ಯುವಜನ ,ಕ್ರೀಡಾ ಇಲಾಖೆಯ ಉಪನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ಸಹಕಾರ ಸಂಘಗಳ ಕುಂದಾಪುರ ಉಪವಿಭಾಗ ಸಹಾಯಕ ನಿಬಂದಕಿ ಚಂದ್ರಪ್ರತಿಮಾ, ನಗರ ಸಭಾ ಸದಸ್ಯ ರಮೇಶ್ ಕಾಂಚನ್, ಉದ್ಯಮಿ ಜೆರ್ರಿ ವಿನ್ಸಂಟ್ ಡಯಾಸ್, ಸಂಘದ ಉಪಾಧ್ಯಕ್ಷ ಎಲ್.ಉಮಾನಾಥ್ ಉಪಸ್ಥಿತರಿದ್ದರು.
ಸೊಸಾೈಟಿ ಅಧ್ಯಕ್ಷ ಸಂಜೀವ ಕಾಂಚನ್ ಸ್ವಾಗತಿಸಿ, ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ವಂದಿಸಿದರು ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ತುಳುವ ಶ್ರೇಷ್ಠ ಸಾಂಸ್ಥಿಕ ಪ್ರಶಸ್ತಿ

ಉಡುಪಿಯ ಪ್ರತಿಷ್ಟಿತ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾೈಟಿಯು 9ನೇ ಅಖಿಲ ಕರ್ನಾಟಕ ತುಳು ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಶತಮಾನದ ಶ್ರೇಷ್ಠ ಸಾಂಸ್ಥಿಕ ಗೌರವ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯನ್ನು ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾದ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನಾದವೈಭವಂ ವಾಸುದೇವ ಭಟ್, ಕರ್ನಾಟಕ ಸಿನಿಮಾ ಸೆನ್ಸರ್ ಮಂಡಳಿ ಸದಸ್ಯರಾದ ಜಯಪ್ರಕಾಶ್ ಅರ್ ಶೆಟ್ಟಿ, ವಿಶ್ವನಾಥ ಶೆಣೈ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕರಾದ ಜಯಕರ ಶೆಟ್ಟಿ ಇಂದ್ರಾಳಿ, ಅಖಿಲ ಕರ್ನಾಟಕ ತುಳು ಬೆಳದಿಂಗಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾದ ಶೇಖರ್ ಅಜೆಕಾರು ಉಪಸ್ಥಿತರಿದ್ದರು.

ಸಾರ್ವಜನಿಕರ ಭಾವನೆಗಳಿಗೆ ಸ್ಪಂದಿಸಿ- ಸಚಿವ ಪ್ರಮೋದ್‍ಮದ್ವರಾಜ್

ಜನ ಸೇವೆಗಾಗಿ ಇರುವ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಸಾರ್ವಜನಿಕರ ನೋವು ಭಾವನೆಗಳಿಗೆ ಪ್ರತಿ ಹಂತದಲ್ಲೂ ಸ್ಪಂದನೆ ಸಿಗುವಂತಾಗಬೇಕು ಎಂದು ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಪ್ರಮೋದ್ ಮದ್ವರಾಜ್ ಅವರು ವಿಜಯ ಕರ್ನಾಟಕ ಹಾಗೂ ಟೈಮ್ಸ್ ಅ¥sóï ಇಂಡಿಯಾ ವತಿಯಿಂದ ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸಹಯೋಗದೊಂದಿಗೆ ಟೈಮ್ಸ್ ಕನೆಕ್ಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದ ಜತೆಗೆ ಸಂವಿಧಾನದಲ್ಲಿ ಉಲ್ಲೇಖವಿಲ್ಲದಿದ್ದರೂ ಮಾಧ್ಯಮದ ಪಾತ್ರ ಬಹಳಪ್ರಮುಖ್ಯವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಅಧ್ಯಕ್ಷ ದಿವಾಕರ ಶೆಟ್ಟಿ, ಸಂಚಾರಿ ಪೆÇಲೀಸ್ ಠಾಣಾ ನಿರೀಕ್ಷಕ ಶೇಖರ್,ಡಿಸಿಐಬಿ ನಿರೀಕ್ಷಕ ಸಂಪತ್ ಕುಮಾರ್,ಟೈಮ್ಸ್ ಆಫ್ ಇಂಡಿಯಾ ಮಂಗಳೂರು ಬ್ಯೂರೋ ಸ್ಟ್ಯಾನ್ಲಿ ಪಿಂಟೊ, ಮಂಗಳೂರು ವಿಭಾಗದ ಚೀ¥sóï ಮ್ಯಾನೇಜರ್ ಕದ್ರಿ ನವನೀತ್ ಶೆಟ್ಟಿ ಉಪಸ್ಥಿತರಿದ್ದರು.