ಜನ ಸೇವೆಗಾಗಿ ಇರುವ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಸಾರ್ವಜನಿಕರ ನೋವು ಭಾವನೆಗಳಿಗೆ ಪ್ರತಿ ಹಂತದಲ್ಲೂ ಸ್ಪಂದನೆ ಸಿಗುವಂತಾಗಬೇಕು ಎಂದು ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಪ್ರಮೋದ್ ಮದ್ವರಾಜ್ ಅವರು ವಿಜಯ ಕರ್ನಾಟಕ ಹಾಗೂ ಟೈಮ್ಸ್ ಅ¥sóï ಇಂಡಿಯಾ ವತಿಯಿಂದ ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಸಹಯೋಗದೊಂದಿಗೆ ಟೈಮ್ಸ್ ಕನೆಕ್ಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗದ ಜತೆಗೆ ಸಂವಿಧಾನದಲ್ಲಿ ಉಲ್ಲೇಖವಿಲ್ಲದಿದ್ದರೂ ಮಾಧ್ಯಮದ ಪಾತ್ರ ಬಹಳಪ್ರಮುಖ್ಯವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸಾೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಅಧ್ಯಕ್ಷ ದಿವಾಕರ ಶೆಟ್ಟಿ, ಸಂಚಾರಿ ಪೆÇಲೀಸ್ ಠಾಣಾ ನಿರೀಕ್ಷಕ ಶೇಖರ್,ಡಿಸಿಐಬಿ ನಿರೀಕ್ಷಕ ಸಂಪತ್ ಕುಮಾರ್,ಟೈಮ್ಸ್ ಆಫ್ ಇಂಡಿಯಾ ಮಂಗಳೂರು ಬ್ಯೂರೋ ಸ್ಟ್ಯಾನ್ಲಿ ಪಿಂಟೊ, ಮಂಗಳೂರು ವಿಭಾಗದ ಚೀ¥sóï ಮ್ಯಾನೇಜರ್ ಕದ್ರಿ ನವನೀತ್ ಶೆಟ್ಟಿ ಉಪಸ್ಥಿತರಿದ್ದರು.